ಮಂಗಳೂರು: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕೆಂದು ಆಗ್ರಹಿಸಿ ಹಲವು ಸಂಘಟನೆಗಳು ನ.1ರ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನವನ್ನಾಗಿ ಆಚರಿಸಿವೆ. ಟ್ವಿಟರ್ನಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೆ ಟ್ವೀಟ್ ಅಭಿಯಾನ ಹಮ್ಮಿಕೊಂಡಿದ್ದು, ಸಾವಿರಾರು ಮಂದಿ ಟ್ವೀಟ್ ಮಾಡುವ ಮೂಲಕ ತುಳುಭಾಷೆ ಮಾನ್ಯತೆಗೆ ಆಗ್ರಹಿಸಿದ್ದಾರೆ.
ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಹೀಗಾಗುತ್ತಿದ್ದು, ಜನಪ್ರತಿನಿಧಿಗಳಿಗೆ ಕಲಾಪಗಳಲ್ಲಿ ಆಗ್ರಹಿಸಬೇಕು ಎಂದು ಅನೇಕರು ತಮ್ಮ ಟ್ವಿಟ್ ಮೂಲಕ ಪ್ರಧಾನಿ, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಸಹಿತ ವಿವಿಧ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದಾರೆ.
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಸಮಿಯೊಂದನ್ನು ರಚಿಸಿತ್ತು. ಆದರೆ ಸಮಿತಿ ರಚಿಸಿದ ಸಮಿತಿಯ ವರದಿ ಇನ್ನೂ ಬಹಿರಂಗಗೊಂಡಿಲ್ಲ. ವಿಶ್ವತ ವರದಿಯನ್ನು ರಾಜ್ಯ ಸರಕಾರಕ್ಕೆ ಈಗಾಗಲೇ ಸಲ್ಲಿಸಲಾಗಿದ್ದು, ಬಳಿಕ ಚುನಾವಣೆ ವಿಚಾರ ಬಂದ ಕಾರಣ ಮುನ್ನೆಲೆಗೆ ಬರಲಿಲ್ಲ.