ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ ದ.ಕ.ಜಿಲ್ಲೆಯ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. 20 ಮಂದಿ ಯಾತ್ರಾರ್ಥಿಗಳು ಸಿ.ಆರ್.ಪಿ.ಎಫ್ ನ ಕ್ಯಾಂಪ್ ನಲ್ಲಿ ಸುರಕ್ಷಿತವಾಗಿದ್ದಾರೆ. ಬಂಟ್ಬಾಳ ತಾಲೂಕಿನ ನರಿಕೊಂಬಿನ ಸಂತೋಷ್ ಮಾರುತಿನಗರ ನೇತೃತ್ವದ ತಂಡ ಕ್ಯಾಂಪ್ ನಲ್ಲಿ ಆಶ್ರಯಪಡೆದಿದ್ದಾರೆ.
ರಂಭಾನ್ ಎಂಬಲ್ಲಿ ಗುಡ್ಡ ಕುಸಿತದಿಂದ ಅಮರನಾಥ ದಾರಿ ಸಂಪೂರ್ಣ ಸ್ಥಗಿತವಾಗಿದ್ದು, ಮಣ್ಣು ತೆರವು ಕಾರ್ಯ ನಡೆಯುತ್ತಿದ್ದರೂ ಮತ್ತೆ ಭೂಕುಸಿತವಾಗುತ್ತಿದೆ. 20 ಮಂದಿ ಯಾತ್ರಾರ್ಥಿಗಳ ತಂಡ ಭೂಕುಸಿತ ಕಂಡ ಕಾರಣ ಯಾತ್ರೆ ಸ್ಥಗಿತಗೊಳಿಸಿದೆ. ಅಮರನಾಥ ದೇವಾಲಯಕ್ಕೂ ಹೋಗಲು ಸಾಧ್ಯವಾಗದೆ, ಅತ್ತ ಜಮ್ಮು ಕಾಶ್ಮೀರ ಕ್ಕೂ ಹೋಗಲು ಸಾಧ್ಯವಾಗಿಲ್ಲ. ಹೀಗಾಗಿ ಸಿ.ಆರ್.ಪಿ.ಎಫ್ ಕ್ಯಾಂಪ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಜುಲೈ 4ರಂದು ರೈಲಿನ ಮೂಲಕ ದ.ಕ.ಜಿಲ್ಲೆ ಹಾಗೂ ಉಡುಪಿಯ ವಿವಿಧ ತಾಲೂಕಿನ ಯಾತ್ರಾರ್ಥಿಗಳು ಯಾತ್ರೆ ಕೈಗೊಂಡಿದ್ದರು.
ನರಿಕೊಂಬುನಿಂದ ಒಟ್ಟು 5 ಮಂದಿ, ಮಂಗಳೂರು ಅಡ್ಯಾರಿನಿಂದ 8, ಪುತ್ತೂರಿನಿಂದ 1, ಉಡುಪಿಯಿಂದ 1 , ಮೂಡಬಿರೆಯಿಂದ 1 , ಸಜೀಪದಿಂದ 3, ಉಪ್ಪಿನಂಗಡಿ ಕರಾಯದಿಂದ 1 ತಂಡ ಯಾತ್ರೆಯಲ್ಲಿ ಪಾಲ್ಗೊಂಡಿದೆ.