ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಬೆಳಿಗ್ಗೆನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.
ಬಂಟ್ವಾಳದ ಅಗ್ರಾರ್ ನಿವಾಸಿಯಾಗಿದ್ದು ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿಸಿರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ.ಸಿ ಬಸ್ ಹತ್ತುವ ಸಮಯದಲ್ಲಿ ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿಗೆ ಬೆದರಿಸಿದ್ದಲ್ಲದೆ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತು ಬೆಳೆದಿದೆ ಎನ್ನಲಾಗಿದೆ. ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ತಿಳಿಸಿದ್ದಾಳೆ. ಪೋಷಕರು ಮತ್ತು ವಿದ್ಯಾರ್ಥಿನಿಕೂಡಲೇ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ನಗರ ಠಾಣಾ ಪೋಲೀಸರು ಅಪರಿಚಿತ ಆರೋಪಿಯನ್ನು ಪತ್ತೆ ಹಚ್ಚಿ ಆತನ ಮೇಲೆ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.