ಪುತ್ತೂರು: ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಮಸೀದಿ ಆವರಣಕ್ಕೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ’ ಎಂದು ಆರೋಪಿಸಿ ಮಸೀದಿ ಆಡಳಿತ ಮಂಡಳಿ ಕಡಬ ಠಾಣೆಯಲ್ಲಿ ದೂರು ದಾಖಲಿಸಿದೆ. ಭಾನುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಕಡಬ ಠಾಣೆ ವ್ಯಾಪ್ತಿಯ ಮರ್ಧಾಳ ಬದ್ರಿಯಾ ಜುಮಾ ಮಸೀದಿಯಲ್ಲಿ ಘಟನೆ ನಡೆದಿದೆ. ಎನ್ನುವ ಆರೋಪ ಕೇಳಿಬಂದಿದೆ. ಮಸೀದಿ ಕಾಂಪೌಂಡ್ ಒಳಗೆ ಬೈಕಿನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಬೈಕ್ ತಿರುಗಿಸಿ ತೆರಳಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೈಶ್ರೀರಾಮ್ ಘೋಷಣೆ ಕೂಗಿದ ಯುವಕರು, ಮಸೀದಿಯಲ್ಲಿದ್ದ ಧರ್ಮಗುರುಗಳನ್ನು ನೋಡಿ ತಕ್ಷಣ ಹಿಂತಿರುಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಸ್ಥಳಕ್ಕಾಗಮಿಸಿದ ಕಡಬ ಠಾಣೆ ಎಸ್ಐ ಹಾಗೂ ಉಪ್ಪಿನಂಗಡಿ ಠಾಣೆ ಎಸ್ಐ ಮತ್ತು ಸಿಬಂದಿ ಪರಿಸರದ ವಿವಿಧ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದು ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ