ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ಬೆಂಗಳೂರು ಮೂಲದ ಅನ್ಯಧರ್ಮದ ಯುವಕನೊಂದಿಗೆ ಹಿಂದು ಯುವತಿ ಧರ್ಮಸ್ಥಳಕ್ಕೆ ಬಂದಿದ್ದು, ಜೋಡಿ ಜತೆಯಾಗಿ ಓಡಾಡುತ್ತಿರುವುದನ್ನು ಕಂಡ ಸಾರ್ವಜನಿಕರು ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ. ಈ ಯುವಕ ಯುವತಿ ಧರ್ಮಸ್ಥಳದಲ್ಲಿ ಅಡ್ಡಾಡುತ್ತಿರುವುದನ್ನು ಕಂಡ ಸಾರ್ವಜನಿಕರು ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
