main logo

ಪಾಣೆಮಂಗಳೂರು ನೂತನ ಸೇತುವೆಯಲ್ಲಿ ಲಾರಿ ಡಿಕ್ಕಿಯಾಗಿ ಯುವಕೃಷಿಕ ದಾರುಣ ಸಾವು

ಪಾಣೆಮಂಗಳೂರು ನೂತನ ಸೇತುವೆಯಲ್ಲಿ ಲಾರಿ ಡಿಕ್ಕಿಯಾಗಿ ಯುವಕೃಷಿಕ ದಾರುಣ ಸಾವು

ಬಂಟ್ವಾಳ : ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಅವರ ಹಿರಿಯ ಮಗ ರಾಜ್ ಕುಮಾರ್ ಅವರು ಮೃತಪಟ್ಟ ದುರ್ದೈವಿ. ರಾಜ್ ಕುಮಾರ್ ಅವರು ವಾಮದಪದವು ಎಂಬಲ್ಲಿ ಜಾಗ ಖರೀದಿ ಮಾಡಿದ್ದು,ಕೃಷಿ ಮಾಡಿಕೊಂಡಿದ್ದರು.
ವಾಮದಪದವಿನ ಮನೆಯಿಂದ ಸಜೀಪ ಮೂಲ ಮನೆಗೆ ಬರುವ ವೇಳೆ ಎದುರಿನಿಂದ ಬಂದ ಪವಿತ್ರ ಕನ್ಸ್ ಟ್ರಕ್ಷನ್ ಗೆ ಸೇರಿದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!