ಬೆಂಗಳೂರು: ‘ಗೃಹಲಕ್ಷ್ಮೀ ಯೋಜನೆ’ಗೆ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಇಂದು ಟ್ವೀಟ್ ಮಾಡಲಾಗಿತ್ತು. ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸೂಚನೆ ಮೇರೆಗೆ ಇಲಾಖೆ ಅಧಿಕಾರಿಗಳು ಟ್ವೀಟ್ ಡಿಲೀಟ್ ಮಾಡಿದ್ದಾರೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತ್ರಿಕ್ರಿಯಿಸಿ , ‘ಗೃಹಲಕ್ಷ್ಮೀ ನೋಂದಣಿ ಸ್ಥಗಿತ ಆಗಿದೆ ಎಂದು ಕೇಳಿ ನನಗೆ ಆಶ್ಚರ್ಯ ಆಯ್ತು.ಅತಾಚುರ್ಯದಿಂದ ನಮ್ಮ ಇಲಾಖೆಯಿಂದ ಈ ಟ್ವೀಟ್ ಆಗಿದೆ. ಏಕೆ ಆ ರೀತಿ ಆಯ್ತು ಗೊತ್ತಿಲ್ಲ. ಟ್ವೀಟ್ ಸಂಬಂಧ ಎಲ್ಲರಿಗೂ ನೋಟಿಸ್ ಜಾರಿ ಮಾಡಿದ್ದೇವೆ. ಈ ವಿಚಾರವನ್ನು ಬಹಳ ಸೀರಿಯಸ್ ಆಗಿ ತೆಗೆದುಕೊಂಡಿದ್ದೇವೆ. ಸಾಮಾಜಿಕ ಜಾಲತಾಣ ನಿರ್ವಹಿಸುವವರ ವಿರುದ್ಧ ಕ್ರಮ ಆಗುತ್ತೆ..’ ಎಂದು ಸ್ಪಷ್ಟನೆ ನೀಡಿದ್ದಾರೆ.
ಈಗಾಗಲೇ ಬ್ಯಾಂಕುಗಳಿಗೆ ಹಣ ವರ್ಗಾವಣೆಗೊಂಡಿದ್ದು, ಅಲ್ಲಿ ಸ್ವಲ್ಪ ನಿಧಾನವಾಗಿದೆ. ಇನ್ನು ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗುತ್ತೆ. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆಗುತ್ತಿದೆ. ಫಲಾನುಭವಿಗಳಿಗೆ ನಮ್ಮ ಇಲಾಖೆಯಿಂದ ಹಣ ಕಳುಹಿಸುತ್ತಿದ್ದೇವೆ. ಹೊಸದಾಗಿ ನೋಂದಣಿ ಮಾಡಿಕೊಂಡವರಿಗೂ ಲಾಭ ಸಿಗುತ್ತಿದ್ದು ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ ಎಂದು ತಿಳಿಸಿದರು.