ಉಡುಪಿ: ಕರಾವಳಿಯ ಪ್ರಸಿದ್ಧ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕರಾವಳಿಯ ಅನೇಕ ಭಾಗಗಳಲ್ಲಿ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆ ಇದಾಗಿದ್ದು ಹೊರ ಜಿಲ್ಲೆಗಳಲ್ಲೂ ಚಿನ್ನದ ಮಳಿಗೆಗಳನ್ನು ಹೊಂದಿದೆ. ಇಂದು ಬೆಳಗ್ಗೆ ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಏಕಕಾಲದಲ್ಲಿ ಆಭರಣದ ಅನೇಕ ಮಳಿಗೆಗಳಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.