ಎರ್ನಾಕುಲಂ: ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡವಿರುವ ಶಂಕೆಯ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ನಡುವೆ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದಾನೆ. ಮೀನಹಿಲೆ ಎಂಬ ಕೊಚ್ಚಿಯ ವ್ಯಕ್ತಿ ಕನ್ವೆನ್ಷನ್ ಸೆಂಟರ್ನಲ್ಲಿ ಬಾಂಬ್ ಇಟ್ಟಿರುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ವ್ಯಕ್ತಿಯನ್ನು ಕೊಚ್ಚಿಯಿಂದ ಕರೆದೊಯ್ದಿದ್ದಾರೆ, ಆತ ಯಾವುದಾದರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಆತಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ, ತಾನೇ ಈ ಅಪರಾಧವೆಸಗಿರುವುದಾಗಿ ಒಪ್ಪಿಕೊಂಡಿದ್ದಾನೆ, ಕಣ್ಣೂರು ಪೊಲೀಸರು ವ್ಯಕ್ತಿಯೊಬ್ಬನ ಬ್ಯಾಗ್ನಲ್ಲಿ ಅನುಮಾನಾಸ್ಪದ ವಸ್ತುಗಳನ್ನು ಗುರುತಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಗುಜರಾತ್ ಮೂಲದ ಈತ ಮಂಗಳೂರಿನಿಂದ ಅರಿಕೋಡಿಗೆ ತೆರಳುತ್ತಿದ್ದ ಎನ್ನಲಾಗಿದೆ. ಪೊಲೀಸರು ಸುಮಾರು 15 ನಿಮಿಷಗಳ ಕಾಲ ಆತನನ್ನು ವಿಚಾರಗೊಳಪಡಿಸಿದ್ದರು, ಅನುಮಾನದ ಮೇಲೆ ವಶಕ್ಕೆ ತೆಗೆದುಕೊಂಡಿದ್ದಾರೆ.