main logo

ಕುಂದಾಪುರ: ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಕುಂದಾಪುರ: ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಕುಂದಾಪುರ: ವಾಣಿಜ್ಯ ತೆರಿಗೆ ಅಧಿಕಾರಿಯ ಕುಂದಾಪುರದ ಮನೆ ಮೇಲೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಕುಂದಾಪುರದ ಎಲ್.ಐ.ಸಿ. ರಸ್ತೆಯಲ್ಲಿರುವ ವಾಣಿಜ್ಯ ತೆರಿಗೆ ಸಹಾಯಕ ಅಭಿಯಂತರ ಅಧಿಕಾರಿ ರಾಜೇಶ್ ಬೆಳಕೇರಿ ಎಂಬುವರ ಮನೆಗೆ ನಸುಕಿನಲ್ಲಿಯೇ ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಮೂಲತಃ ಉತ್ತರ ಕನ್ನಡ ಜಿಲ್ಲೆ ಅಂಕೋಲದ ರಾಜೇಶ್ ಬೆಳ್ಕೆರೆಯವರಾಗಿರುವ ರಾಜೇಶ್ ಕುಂದಾಪುರದ ಎಲ್.ಐ.ಸಿ. ರಸ್ತೆಯ ವಡೇರಹೋಬಳ ಅಡ್ಡರಸ್ತೆಯಲ್ಲಿ ಮನೆ ನಿರ್ಮಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಒಟ್ಟು ಎರಡು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅಂಕೋಲದ ಬೇಳ್ಕೆರೆಯಲ್ಲಿಯೂ ದಾಳಿ ನಡೆಸಿದ್ದಾರೆ. ಕಮರ್ಷಿಯಲ್ ಟ್ಯಾಕ್ಸ್ ಕಚೇರಿಯಲ್ಲಿ ಕಚೇರಿ ಆರಂಭದ ತಕ್ಷಣ ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
ಸುಮಾರು ಏಳು ಲೋಕಾಯುಕ್ತ ಅಧಿಕಾರಿಗಳ ತಂಡ ರಾಜೇಶ್ ಅವರ ಕುಂದಾಪುರದ ಮನೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

error: Content is protected !!