Site icon newsroomkannada.com

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಆರೋಪಿ ನೌಷಾದ್ ಸುಳಿವು ನೀಡಿದವರಿಗೆ 2 ಲಕ್ಷ ರೂ. ಬಹುಮಾನ

ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿದೆ. ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಈ ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಿದ್ದಾರೆ.
2022 ಜುಲೈ 26ರಂದು ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಆರೋಪಿ ನಂಬರ್ 23 ತಲೆಮರೆಸಿಕೊಂಡಿದ್ದಾನೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಷದ್(32) ಎಂಬಾತ ಈ ಹಿಂದೆ ಆರೋಪಿಗಳು ಪರಾರಿಯಾಗಲು ಸಹಕರಿಸಿದ್ದ.
ಈ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು.ಈ ವೇಳೆ ಆರೋಪಿ ನಂಬರ್ ೨೩ ಆದ ನೌಷದ್ ಪ್ರವೀಣ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು.ಈ ಬಗ್ಗೆ ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ಹೋಗಿದ್ದರು.
ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನವನ್ನು ಘೋಷಿಸಿದ್ದಾರೆ. ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿಯನ್ನು ಕೂಡ ಗೌಪ್ಯವಾಗಿಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕರಣೆ ಹೊರಡಿಸಿದೆ.

Exit mobile version