Site icon newsroomkannada.com

ಮನೆ ಮೇಲೆ ಗುಡ್ಡ ಕುಸಿದು ಮಹಿಳೆ ಸಾವು

ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿದು ಮನೆಯೊಳಗೆ ಇಬ್ಬರು ಮಹಿಳೆಯರು ಸಿಲುಕಿದ ಪ್ರಕರಣ ದ.ಕ ಜಿಲ್ಲೆಯ ‌ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ.

ಮನೆಯೊಳಗೆ ಸಿಲುಕಿದ್ದ ನಂದಾವರ ನಿವಾಸಿ ಝರೀನಾ(46) ಸಾವನ್ನಪ್ಪಿದ್ದು, ಝರೀನಾ ಪುತ್ರಿ ಶಫಾ(20) ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಮಣ್ಣಿನಡಿ ಸಿಲುಕಿ ಮೃತಪಟ್ಟ ಝರೀನಾ ಮೃತದೇಹವನ್ನು ಸ್ಥಳೀಯರು ಹಾಗೂ ಪೊಲೀಸರು ಹೊರ ತೆಗೆದಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳಕ್ಕೆ ಭೇಟಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಐದನೇ ಬಲಿ ಇದಾಗಿದೆ.

Exit mobile version